(ವಿಕ್ರಾಂತ ಕರ್ನಾಟಕ ವಾರಪತ್ರಿಕೆಯ ಅಕ್ಟೋಬರ್ 13, 2006 ರ ಸಂಚಿಕೆಯಲ್ಲಿ ಪ್ರಕಟವಾದದ್ದು) ರಾಜಧಾನಿಯ ಹೊರಗೆ ಬೆಳಗಾವಿಯಲ್ಲಿ ಮೊಟ್ಟಮೊದಲ ಬಾರಿಗೆ ನಡೆದ ವಿಶೇಷ ಅಧಿವೇಶನವನ್ನು ಗಮನಿಸುತ್ತ, ಮೂರು ವರ್ಷದ ಹಿಂದೆ ಬರೆದಿದ್ದ “ಬೆಳಗಾವಿ, ಹೊಸೂರು ಮತ್ತು ಅಯೋಗ್ಯ ಆಡಳಿತಗಾರರು” ಲೇಖನವನ್ನು ಮತ್ತೊಮ್ಮೆ ಓದುತ್ತ ಕುಳಿತಾಗ ತೀವ್ರವಾಗಿ ಅನ್ನಿಸುತ್ತಿರುವುದು ಏನೆಂದರೆ, ಇದರಲ್ಲಿ ಜನರ ಪಾಲು ಏನೂ ಇಲ್ಲವೆ ಎನ್ನುವುದು. ಅಯೋಗ್ಯ ಆಡಳಿತಗಾರರು ಎಂದರೆ ಯಾರು? ಪ್ರಜಾಪ್ರಭುತ್ವದಲ್ಲಿ ಅಯೋಗ್ಯರು ಅದು ಹೇಗೆ ಆಡಳಿತಗಾರರಾದರು? ಅವರನ್ನು ಚುನಾಯಿಸಿದವರು ಯಾರು? ಯಾಕಾಗಿ ಅಂತಹವರನ್ನು ಚುನಾಯಿಸಿದರು? [...]
(ವಿಕ್ರಾಂತ ಕರ್ನಾಟಕ ವಾರಪತ್ರಿಕೆಯ ಅಕ್ಟೋಬರ್ 06, 2006 ರ ಸಂಚಿಕೆಯಲ್ಲಿ ಪ್ರಕಟವಾದದ್ದು) ಶಿಕ್ಷಣ ಬಚಾವೊ ಆಂದೋಲನವಂತೆ, ಅದು ವಾರದ ಹಿಂದೆ ಬೆಂಗಳೂರಿನಲ್ಲಿ ಶಿಕ್ಷಣ ಸಂಬಂಧಿ ವಿಚಾರ ಸಂಕಿರಣ ಏರ್ಪಡಿಸಿತ್ತಂತೆ. ಅಲ್ಲಿ ಪ್ರಾಸಂಗಿಕವಾಗಿ ಕರ್ನಾಟಕದ ಉನ್ನತ ಶಿಕ್ಷಣ (?) ಸಚಿವ ಡಿ.ಎಚ್. ಶಂಕರಮೂರ್ತಿ ಟಿಪ್ಪು ಸುಲ್ತಾನನ ಬಗ್ಗೆ ಮಾತನಾಡಿದರಂತೆ. ಅವರ ಪ್ರಕಾರ ಪರ್ಷಿಯನ್ ಅನ್ನು ರಾಜ್ಯ ಭಾಷೆ ಮಾಡಿದ ಟಿಪ್ಪು ಸುಲ್ತಾನನಿಗೆ ರಾಜ್ಯದ ಇತಿಹಾಸದಲ್ಲಿ ಸ್ಥಾನ ಕೊಡಬಾರದಂತೆ! ಆತ ಕನ್ನಡ ವಿರೋಧಿಯಂತೆ. ಬಲವಂತವಾಗಿ ಮತಾಂತರ ಮಾಡಿದನಂತೆ. ಶಂಕರಮೂರ್ತಿ ಇದೆಲ್ಲವನ್ನು [...]
(ವಿಕ್ರಾಂತ ಕರ್ನಾಟಕ ವಾರಪತ್ರಿಕೆಯ ಸೆಪ್ಟೆಂಬರ್ 29, 2006 ರ ಸಂಚಿಕೆಯಲ್ಲಿ ಪ್ರಕಟವಾದದ್ದು) ಕರ್ನಾಟಕ ರಾಜ್ಯದ ಗೃಹ ಸಚಿವರಾದ ಎಂ.ಪಿ. ಪ್ರಕಾಶ್ ‘ಈ ವರ್ಷವೂ ಯಾವುದೇ ಕಾರಣಕ್ಕೂ ಬಾಬಾಬುಡನ್ಗಿರಿಯ ಶೋಭಾಯಾತ್ರೆಗೆ ಅವಕಾಶ ಕೊಡುವುದಿಲ್ಲ. ಅದನ್ನು ನಿಷೇಧಿಸುತ್ತೇವೆ’ ಎಂದು ಪತ್ರಕರ್ತರಿಗೆ ಹೇಳಿಕೆ ಕೊಡುತ್ತಾರೆ. ಅದಾದ ಒಂದೆರಡು ದಿನಗಳಲ್ಲಿಯೆ ಆ ಖಾತೆಗೆ ಎಳ್ಳಷ್ಟೂ ಸಂಬಂಧವಿಲ್ಲದ, ಆದರೆ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾದ ಉನ್ನತ ಶಿಕ್ಷಣ ಸಚಿವ ಡಿ.ಎಚ್. ಶಂಕರಮೂರ್ತಿ, ‘ಅದು ಪ್ರಕಾಶರ ಸ್ವಂತ ಅಭಿಪ್ರಾಯವೇ ಹೊರತು ಸರ್ಕಾರದ ತೀರ್ಮಾನವಲ್ಲ’ ಎಂದು ಸ್ಪಷ್ಟಪಡಿಸುತ್ತಾರೆ! [...]