ಆತನ ಸಾವು ಈಗ ವಿಷಾದ ಹುಟ್ಟಿಸುತ್ತಿಲ್ಲ…

ಈಗ ಸ್ವಲ್ಪ ಹೊತ್ತಿನ ಮುಂಚೆ ಫರೀದ್ ಜಕಾರಿಯರವರ “GPS” ನೋಡುತ್ತಿದ್ದೆ. ಫರೀದ್ ಜಕಾರಿಯ ಗೊತ್ತಲ್ಲ? ಭಾರತೀಯ ಸಂಜಾತ; ಅಮೇರಿಕದ ಪತ್ರಕರ್ತ. ಜಾಗತಿಕ ರಾಜಕೀಯ ಆಯಾಮಗಳ ಮೇಲೆ ವಸ್ತುನಿಷ್ಠ ಅಭಿಪ್ರಾಯ ಕೊಡುವ ಅಧ್ಯಯನಶೀಲ. ಬುದ್ಧಿಜೀವಿ. ಭಾರತೀಯ ಮುಸಲ್ಮಾನರ ಬಗ್ಗೆ ಮತ್ತು ಅವರಲ್ಲಿಯ ವೈಚಾರಿಕ-ಸಾಂಸ್ಕೃತಿಕ ನಾಯಕತ್ವದ ದಾರಿದ್ರ್ಯದ ಬಗ್ಗೆ ಯೋಚಿಸಿದಾಗೆಲ್ಲ ನೆನಪಿಗೆ ಬರುವ ಮುಂಬಯಿಯಲ್ಲಿ ಹುಟ್ಟಿ ಬೆಳೆದ ಲೇಖಕ. ಆದರೆ, ಫರೀದ್ ಈಗ ಅಮೆರಿಕನ್ ಪ್ರಜೆ! ಇರಲಿ. ಇವತ್ತು ಫರೀದ್ ಜಕಾರಿಯ ಚೀನಾದ ಪ್ರಧಾನಿ ಮತ್ತು ಅಫ್ಘನ್ ಅಧ್ಯಕ್ಷನ ಸಂದರ್ಶನ [...]

ಅನಾಯಕತ್ವ ಮತ್ತು ಮೂರನೇ ವಿಶ್ವಯುದ್ಧದ ಹಾದಿಯಲ್ಲಿ…

(ವಿಕ್ರಾಂತ ಕರ್ನಾಟಕ ವಾರಪತ್ರಿಕೆಯ ಅಕ್ಟೋಬರ್ 3, 2008 ರ ಸಂಚಿಕೆಯಲ್ಲಿನ ಲೇಖನ.) ಕಳೆದ ಮೂರು ದಶಕಗಳ ಜಾಗತಿಕ ವಿದ್ಯಮಾನಗಳನ್ನು ಗಮನಿಸಿ ನೋಡಿ. 1980 ರ ದಶಕದಲ್ಲಿ ರೊನಾಲ್ಡ್ ರೇಗನ್, ಮಾರ್ಗರೇಟ್ ಥ್ಯಾಚರ್ ಮತ್ತು ಮಿಖಾಯಿಲ್ ಗೋರ್ಬಚೆವ್‌ರ ನಾಯಕತ್ವ ಪ್ರಜಾಪ್ರಭುತ್ವವಾದಿ ಮತ್ತು ಕಮ್ಯುನಿಸ್ಟ್ ದೇಶಗಳ ನಡುವಿನ ಶೀತಲ ಸಮರಕ್ಕೆ ಕೊನೆ ಹಾಡಿತು. ಅಲ್ಲಿಂದ ಇಲ್ಲಿಯವರೆಗೆ ಸುಮಾರು ಮೂರು ದಶಕಗಳ ಕಾಲ ಇಡೀ ವಿಶ್ವವೆ ಮುಕ್ತ ಆರ್ಥಿಕತೆಗೆ, ಜಾಗತೀಕರಣಕ್ಕೆ ತೆರೆದುಕೊಂಡಿತು. ಇದರ ಪರಿಣಾಮವಾಗಿ ಕಳೆದ ಶತಮಾನದ ಹಲವಾರು ಪ್ರಮುಖ ರಾಷ್ಟ್ರಗಳು [...]

ಭಾರತದಲ್ಲಿಯ ಇಸ್ಲಾಮ್ ಮೂಲಭೂತವಾದಿಗಳನ್ನು ಮತ್ತು ಕೋಮುವಾದವನ್ನು ಎದುರಿಸುವುದು ಹೇಗೆ?

(ವಿಕ್ರಾಂತ ಕರ್ನಾಟಕ ವಾರಪತ್ರಿಕೆಯ ಸೆಪ್ಟೆಂಬರ್ 26, 2008 ರ ಸಂಚಿಕೆಯಲ್ಲಿನ ಲೇಖನ.) ಮತ್ತೆ ಇನ್ನೊಂದು ದೊಡ್ಡ ಊರಿನಲ್ಲಿ ಬಾಂಬ್‌ಗಳು ಸ್ಫೋಟಿಸಿವೆ. ಕಳೆದ ವಾರ ದೆಹಲಿಯಲ್ಲಿ ನಡೆದ ಸ್ಫೋಟಗಳಿಂದ ಇಲ್ಲಿಯವರೆಗೆ 21 ಜನ ಸತ್ತಿದ್ದಾರೆ. ಭಾರತದಲ್ಲಿನ ಪ್ರಜಾಪ್ರಭುತ್ವವನ್ನು ಮತ್ತು ಇಲ್ಲಿಯ ವೈವಿಧ್ಯತೆಯನ್ನು ಸಹಿಸದ ಕೆಲವು ವಿಕೃತ ಮನಸ್ಸಿನ ಜನ ಕೈಗೊಂಡ ದಾಳಿ ಇದು. ವಿಪರ್ಯಾಸ ಏನೆಂದರೆ, ಮತಾಂಧತೆ ಮತ್ತು ಜನಾಂಗದ್ವೇಷದಿಂದ ನರಳುವ ಈ ಗುಂಪಿನ ಪ್ರತಿ ಕಾರ್ಯವೂ ಅವರಂತಹುದೆ ಆಲೋಚನೆಗಳ ಇನ್ನೊಂದು ಗುಂಪಿಗೆ ಬಲವನ್ನು ನೀಡುತ್ತ್ತಿದೆ. ಆ ಮಟ್ಟಿಗೆ [...]

ಅಮೆರಿಕದಲ್ಲಿ ಕ್ರಿಶ್ಚಿಯನ್ ಮತೀಯ ರಾಜಕಾರಣ

(ವಿಕ್ರಾಂತ ಕರ್ನಾಟಕ ವಾರಪತ್ರಿಕೆಯ ಸೆಪ್ಟೆಂಬರ್ 19, 2008 ರ ಸಂಚಿಕೆಯಲ್ಲಿನ ಲೇಖನ.) ಅಮೆರಿಕ ಎಂದ ತಕ್ಷಣ ಎಷ್ಟೋ ಸಲ ಅದೊಂದು ಅಂಕೆಶಂಕೆಯಿಲ್ಲದ ಮಹಾನ್ ಲಿಬರಲ್ ದೇಶ ಎನ್ನುವ ಕಲ್ಪನೆ ತಾನೆತಾನಾಗಿ ಬಂದುಬಿಡುತ್ತದೆ. ವಿಚ್ಚೇದನಗಳು, ಮರುಮದುವೆಗಳು, half-sisterಗಳು, hlaf-brotherಗಳು, ಸಿಂಗಲ್ ಮಾಮ್‌ಗಳು, ಸಮಾನತೆಗೆ ಹೋರಾಡುವ ಜನರು, ಪ್ರಜಾಪ್ರಭುತ್ವವಾದಿಗಳು; ಇವೆಲ್ಲ ಅಮೆರಿಕದ ಸಮಾಜದ ಬಗ್ಗೆ ನಮ್ಮಂತಹ ವಿದೇಶಿಯರಲ್ಲಿ ತಕ್ಷಣ ಮೂಡುವ ಚಿತ್ರಗಳು. ಆದರೆ, ಈ ಮುಂದುವರೆದ ದೇಶದಲ್ಲಿ ಕೋಮುವಾದಂತಹ ಸಂಕುಚಿತತೆ ಯಾವ ಹಂತದಲ್ಲಿ ಜೀವಂತವಾಗಿದೆ ಎನ್ನುವುದನ್ನು ನಮ್ಮ ಓದುಗರಿಗೆ ಪರಿಚಯಿಸಲು [...]

ಬರಾಕ್ ಒಬಾಮ ಮತ್ತು ಜಾನ್ ಮೆಕೈನ್: ಯಾರು ಸರಿ?

(ವಿಕ್ರಾಂತ ಕರ್ನಾಟಕ ವಾರಪತ್ರಿಕೆಯ ಸೆಪ್ಟೆಂಬರ್ 12, 2008 ರ ಸಂಚಿಕೆಯಲ್ಲಿನ ಲೇಖನ.) ಕಾಲ್ಪನಿಕ ಕತೆಗಳನ್ನು ಬರೆಯುವ ಕತೆಗಾರರನ್ನೂ ಮೀರಿಸುವಂತಹ ಅದ್ಭುತವಾದ ಐತಿಹಾಸಿಕ ಸಂದರ್ಭದಲ್ಲಿ ಇವತ್ತು ಅಮೆರಿಕ ಬಂದು ನಿಂತುಬಿಟ್ಟಿದೆ. ಈ ದೇಶದ ಕೋಟ್ಯಾಂತರ ಜನರು ಮತ್ತು ಕೆಲವು ಅರ್ಹ ವ್ಯಕ್ತಿಗಳು ಸೇರಿಕೊಂಡು ಈ ಇತಿಹಾಸ ನಿರ್ಮಿಸ ಹೊರಟಿದ್ದಾರೆ. ಈಗಾಗಲೆ ಒಂದು ಹಂತದ ಇತಿಹಾಸ ನಿರ್ಮಾಣವಾಗಿ ಹೋಗಿದೆ. ಕೇವಲ ನಲವತ್ತು-ಐವತ್ತು ವರ್ಷಗಳ ಹಿಂದೆ ಅಮೆರಿಕದ ಕೆಲವು ದಕ್ಷಿಣ ರಾಜ್ಯಗಳ ರೆಸ್ಟಾರೆಂಟ್‌ಗಳಿಗೆ, ಟಾಯ್ಲೆಟ್‌ಗಳಿಗೆ, ಬಸ್ಸಿಗೆ ಕಾಯುವ ಕೋಣೆಗಳಿಗೆ, ಮತ್ತೂ ಇನ್ನೂ [...]

ಧಾರವಾಡದಲ್ಲಿ ಹುಟ್ಟಿ ಬಾಲ್ಟಿಮೋರ್‌ನಲ್ಲಿ ಹರಿದ ನಮ್ಮೆಲ್ಲರ ಶಾಲ್ಮಲಾ!

(“ಅಕ್ಕ 2006″ ರ ಸಮಯದಲ್ಲಿ ಬರೆದದ್ದು. “ವಿಕ್ರಾಂತ ಕರ್ನಾಟಕ” ವಾರಪತ್ರಿಕೆಯ ಸೆಪ್ಟೆಂಬರ್ 22, 2006ರ ಸಂಚಿಕೆಯಲ್ಲಿ ಈ ಲೇಖನ ಪ್ರಕಟವಾಗಿದೆ.) ಅದು 1994. ಧಾರವಾಡ ವಿಶ್ವವಿದ್ಯಾನಿಲಯದ ಹಾಸ್ಟೆಲ್‌ನಲ್ಲಿ ಸ್ನೇಹಿತರೊಬ್ಬರ ರೂಮಿನಲ್ಲಿ ಒಂದು ರಾತ್ರಿ ತಂಗಿದ್ದೆ. ಅಂದು ಅವರು ಕ್ಯಾಂಪಸ್‌ನ ಬಗ್ಗೆ ಮಾತನಾಡುತ್ತ ಅಲ್ಲಿ ಹರಿಯುವ ಶಾಲ್ಮಲ ನದಿಯ ಬಗ್ಗೆ ಹೇಳಿದ್ದರು. ಅದೇ ಮೊದಲ ಸಲ ಆ ಮುದ್ದಾದ ಹೆಸರನ್ನು ಕೇಳಿದ್ದು. ಇಲ್ಲಿಯವರೆಗೂ ನೋಡಿಲ್ಲದ ಆ ಗುಪ್ತಗಾಮಿನಿ ನನಗೆ ಅಂದೇ ಆಪ್ತವಾಗಿಬಿಟ್ಟಿತು. ನಾಲ್ಕೈದು ವರ್ಷಗಳ ಹಿಂದೆ ಹೀಗೆ ಅಂತರ್ಜಾಲದಲ್ಲಿ [...]