ಅನುವಾದಿತ ಸಣ್ಣ ಕತೆ: ಒಂದು ಜಾಹಿರಾತು

- ತೆಲುಗು ಮೂಲ: ಶಿವಂ (ಕೃಪೆ: ದಟ್ಸ್‌ತೆಲುಗು.ಕಾಂ) [ಮೊದಲು (ಜುಲೈ 25, 2003) ದಟ್ಸ್‌ಕನ್ನಡ.ಕಾಮ್‌ನಲ್ಲಿ ಪ್ರಕಟವಾಗಿತ್ತು. ಈಗ ಇಲ್ಲಿ.] “ಎಲ್ಲಿ ಒಂದು ನಗು ನಗಿ!” ದಿನಪತ್ರಿಕೆಯಲ್ಲಿನ ಒಂದು ಟೂತ್‌ಪೇಸ್ಟ್ ಜಾಹೀರಾತು ಕೇಳುತ್ತಿದೆ. ನಗು! ಎಷ್ಟು ದಿನಗಳಾದವು ಅವನು ನಕ್ಕು! ಬಹುಶಃ ಹದಿನೈದು ವರ್ಷವಾದರೂ ಆಗಿರಬೇಕು. ಹೌದು. ಹದಿನೈದು ವರ್ಷಗಳು. ಅವನಿಗೆ ಹದಿನೇಳು ಇದ್ದಾಗ ಶಾಲಾಮಾಸ್ತರ ಬಾಳೆಹಣ್ಣಿನ ಸಿಪ್ಪೆಯ ಮೇಲೆ ಜಾರಿ ಬಿದ್ದು ಬಿಟ್ಟ. ವೆಂಕಟರಾವು ಇರಬಹುದು, ಪಂಡಿತರನ್ನು ಹಿಡಿದು ನಿಲ್ಲಿಸಲು ಹೋದ. ಮಾಸ್ತರರು ಕ್ರೋಧದಿಂದ ವೆಂಕಟರಾವಿನ ಬೆನ್ನಿನ [...]

ನಂಜನಗೂಡಿನಲ್ಲಿ ನಿಗೂಢ ರಾತ್ರಿ

(KKNC ಯ 2005 ರ ಸ್ವರ್ಣಸೇತುವಿಗೆ ಬರೆದಿದ್ದ ಲೇಖನ. ಬ್ಲಾಗ್‌ಗೆ ಏರಿಸುತ್ತಿದ್ದೇನೆ.) ಮೊನ್ನೆ (2005 ರ) ಜೂನ್‌ನಲ್ಲಿ ಹೆಂಡತಿ ಮತ್ತು ಮಗುವಿನೊಂದಿಗೆ ಭಾರತದ ಪ್ರವಾಸ ಹೋಗಿದ್ದಾಗ ಸುಮಾರು ನಾಲ್ಕು ವಾರಗಳನ್ನು ನನ್ನದೇ ತರಲೆ ತಾಪತ್ರಯಗಳಲ್ಲಿ, ಬರಬಾರದ, ಬಯಸಬಾರದ ಅನುಭವ ಮತ್ತು ಕಷ್ಟಗಳಲ್ಲಿ ಕಳೆದೆ. ಒಳ್ಳೆಯ ಸಮಯ ಇರಲೇ ಇಲ್ಲ ಅಂತಲ್ಲ; ಬೆಲ್ಲಕ್ಕಿಂತ ಬೇವೇ ಹೆಚ್ಚಿತ್ತು. ಹಾಗಾಗಿ, ಉಳಿದ ಒಂದು ವಾರದಲ್ಲಾದರೂ ಒಂದೆರಡು ದಿನ ಮನೆಯವರೆಲ್ಲರ ಜೊತೆ ಎಲ್ಲಾದರೂ ಹೋಗಿಬರೋಣ ಎಂದು ಶನಿವಾರ ಮಧ್ಯಾಹ್ನ ನಮ್ಮ Scorpio ವ್ಯಾನಿನಲ್ಲಿ [...]

ಸಣ್ಣಕತೆ – ನಾನು, ಅವನು, ಮೋನಪ್ಪ.

[2004 ರ ಜನವರಿಯಲ್ಲಿ, ಅಂದರೆ ಸುಮಾರು ಐದು ವರ್ಷಗಳ ಹಿಂದೆ ಬರೆದ ಕಥೆ ಇದು. ಮೊದಲು ನನ್ನ ಪುಸ್ತಕದಲ್ಲಿ ಪ್ರಕಟವಾಗಿತ್ತು. 2003 ರ ಕೊನೆಯಲ್ಲಿ ಕರ್ನಾಟಕದ ಸಾಹಿತ್ಯಕ-ಸಾಂಸ್ಕೃತಿಕ ರಂಗದಲ್ಲಿ ನಡೆದ ಕೆಲವು ಘಟನೆಗಳು ಹಾಗೂ ನಿರಂಕುಶಮತಿಯಂತೆ ಕಾಣಿಸುತ್ತಿದ್ದ ಸ್ನೇಹಿತನೊಬ್ಬ ಹೇಳಿದ ಅಂಧಾಭಿಮಾನ ಎನ್ನಿಸಿದ ಮಾತು ಈ ಕಥೆಗೆ ಮೂಲ ಪ್ರೇರಣೆ. ಇದನ್ನು ಬರೆಯುವಾಗ ಈ ಕತೆ ಈಗ ಮಾತ್ರ ಪ್ರಸ್ತುತ ಎನ್ನಿಸುತ್ತಿತ್ತು. ಆದರೆ, ನಾಲ್ಕೈದು ವರ್ಷಗಳ ನಂತರವೂ ಇದು ಪ್ರಸ್ತುತವಾಗುತ್ತಲೆ ಹೋಗುತ್ತಿದೆ. ದಟ್ಸ್‌ಕನ್ನಡದಲ್ಲಿದ್ದ ಕೊಂಡಿ ಈಗ ಕೆಲಸ [...]

ಗೋಮೂತ್ರ, ಗೋಹತ್ಯೆ, ಮತಾಂತರ – ಅವಧಿ, ಜೋಗಿ, ಕೆಂಡಸಂಪಿಗೆ

ಕನ್ನಡದ ಅಂತರ್ಜಾಲ ಪ್ರಪಂಚ ಬದಲಾದ ಕಾಲಘಟ್ಟವನ್ನು ದಾಖಲಿಸುತ್ತ ಎರಡು ವಾರಗಳ ಹಿಂದೆ “ಇತ್ತೀಚಿನ ಕನ್ನಡ ಬ್ಲಾಗುಗಳು, ಕೋಮುವಾದ, ಆರ್ಥಿಕ ಅಭಿವೃದ್ಧಿ,” ಎಂಬ ಬ್ಲಾಗ್ ಲೇಖನ ಬರೆದಿದ್ದೆ. ಆ ಲೇಖನದಲ್ಲಿ ಪ್ರಾಸಂಗಿಕವಾಗಿ ಮಂಗಳೂರಿನ ಡಾ. ಕಕ್ಕಿಲಾಯರ “ಆರೋಗ್ಯ ಸಂಪದ” ತಾಣವನ್ನು ಉದಾಹರಿಸಿದ್ದೆ. ಡಾ. ಕಕ್ಕಿಲಾಯರ ಹಲವಾರು ಲೇಖನಗಳನ್ನು ಓದಿದ್ದ ನನಗೆ ಅವರ ಇತ್ತೀಚಿನ ಲೇಖನವಾದ “ಗೋಮಯ, ಗೋಮೂತ್ರ: ಔಷಧಗಳೋ, ಅಪಮಾನವೋ?” ನಮ್ಮ ಸದ್ಯದ ಸ್ಥಿತಿಗೆ ಬಹಳ ಪ್ರಸ್ತುತವಾಗಿ ಕಂಡಿತು. ಖುಷಿಯ ವಿಚಾರ ಏನೆಂದರೆ, ಇದಾದ ನಂತರ ಅವಧಿಯವರೂ ಕಕ್ಕಿಲಾಯರವರ [...]

ವಿಜ್ಞಾನವೇ, ದೇವರನ್ನು ಹುಡುಕಿಕೊಡು…

(ವಿಕ್ರಾಂತ ಕರ್ನಾಟಕ ವಾರಪತ್ರಿಕೆಯ ಅಕ್ಟೋಬರ್ 24, 2008 ರ ಸಂಚಿಕೆಯಲ್ಲಿನ ಲೇಖನ.) ಅಮೆರಿಕ ಸರಿಯಾಗಿ 50 ವರ್ಷಗಳ ಹಿಂದೆ (1958) ಭೂಮಿಯ ಕಕ್ಷೆಯನ್ನು ದಾಟಿ ಹೋಗುವಂತಹ ರಾಕೆಟ್ ಉಡಾಯಿಸಿದ್ದು. ಕೃತಕ ಉಪಗ್ರಹವೊಂದು ಚಂದ್ರನನ್ನು ಸುತ್ತು ಹಾಕಿ ಬರುವುದು ಆ ಉಡಾವಣೆಯ ಗುರಿಯಾಗಿತ್ತು. ಆದರೆ ಉಡಾಯಿಸಿದ 77 ಸೆಕೆಂಡುಗಳಲ್ಲಿ, ಭೂಮಿಗಿಂತ ಕೇವಲ 16 ಕಿ.ಮಿ. ಮೇಲೆ ಆ ರಾಕೆಟ್ ಸ್ಫೋಟವಾಗಿ, ಮೊದಲ ಪ್ರಯತ್ನದಲ್ಲೆ ಸೋಲಾಗಿತ್ತು. ಆದರೂ, ಸೋವಿಯತ್ ರಷ್ಯಾಕ್ಕೆ ಸೋಲಬಾರದೆಂಬ ಪೈಪೋಟಿಯಲ್ಲಿ ಅವರು ಮುಂದಿನ ಒಂದೇ ವರ್ಷದಲ್ಲಿ ಮತ್ತೆ [...]

Sorry, we are letting you go…

ಊಫ್… ಮತ್ತೆ ಇನ್ನೊಂದು ದಿನ (ಅಕ್ಟೋಬರ್ 9, 08) ಅಮೆರಿಕದ ವಾಲ್ ಸ್ಟ್ರೀಟ್ ಭಯಂಕರವಾಗಿ ಬಿತ್ತು. ಕೊನೆಯ ಒಂದು ಗಂಟೆಯಲ್ಲಿ 450 ಪಾಯಿಂಟ್‌ಗಳ free fall! ಇದು ನಮ್ಮ ಕಾಲದ global meltdown. ಮುಂದಿನ ದಿನಗಳಲ್ಲಿ ಇಡೀ ಪ್ರಪಂಚದ ಆರ್ಥಿಕ ಚಿತ್ರಣವೇ ಬದಲಾಗಲಿದೆ. ಹೊಸ ದಿನಗಳತ್ತ ಹೆಜ್ಜೆ ಇಡುತ್ತಿದೆ ವಿಶ್ವ ವ್ಯವಸ್ಥೆ. ಕಳೆದ ತಿಂಗಳ ಕೊನೆಯಲ್ಲಿ ಪತ್ರಿಕೆಯೊಂದು “ಅಮೆರಿಕದ ಆರ್ಥಿಕ ಸಮಸ್ಯೆಗಳು ಮತ್ತು ಅದು ಭಾರತದ ಬಿಪಿಒ ಕಂಪನಿಗಳಲ್ಲಿ ಕೆಲಸ ಮಾಡುವವರ ಮೇಲಿನ ಪ್ರಭಾವ”ದ ಬಗ್ಗೆ ಅಭಿಪ್ರಾಯ [...]