ಹಿಂದೂ ಹುಡುಗ ಮುಸ್ಲಿಂ ಹುಡುಗಿಯನ್ನು ಮದುವೆಯಾದರೆ ಏನಾಗುತ್ತೆ?

ಹಿಂದೂ ಹುಡುಗ ಮುಸ್ಲಿಂ ಹುಡುಗಿಯನ್ನು ಮದುವೆಯಾದರೆ ಏನಾಗುತ್ತೆ? ಏನೂ ಆಗೊಲ್ಲ, ಮುದ್ದಾದ ಎರಡು ಮಕ್ಕಳಾಗುತ್ತೆ! –ಸವಿತಾ ನಾಗಭೂಷಣ ಬಹುಶಃ ನನ್ನ Restless ಮನಸ್ಥಿತಿಯಿಂದಾಗಿಯೊ ಅಥವ ಮತ್ತಿನ್ನೆಂತದ್ದಕ್ಕೊ ಪದ್ಯ-ಕವನ ಓದುವುದು ನನಗೆ ಬಹಳ ಕಷ್ಟ. ಅವನ್ನು ಕತೆ-ಕಾದಂಬರಿ ಓದುವಂತೆ ಬಾಯಿ ತೆರೆಯದೆ ಓದಿಕೊಂಡರೆ ಅವನ್ನು ಅರ್ಥ ಮಾಡಿಕೊಳ್ಳುವುದು, ಪದಗಳ ಮತ್ತು ಭಾವದ ಅರಿವು ಮೂಡುವುದು ಕಷ್ಟವೇನೊ. ಜೊತೆಗೆ ಅದನ್ನು ಗದ್ಯ ಓದಿದಂತೆ ನಿಲ್ಲಿಸದೆ ಸುಮ್ಮನೆ ಓದಿಕೊಂಡು ಹೋಗುವುದೂ ಸರಿಯಲ್ಲವೇನೊ. ಏನೇ ಇರಲಿ ನನ್ನ ಕವನಗಳ ಓದು ಬಹಳ ಸೀಮಿತ. [...]

ಮಾನವ(ವೀಯ) ಪಶು ಸಾಗಾಣಿಕೆ !?

ಭಾರತದಲ್ಲಿ ಊಟ ಸಂಪಾದಿಸಿಕೊಳ್ಳುವುದೇ ದೊಡ್ಡ ಸವಾಲು. ಆ ಸವಾಲು ಸ್ವೀಕರಿಸಿದ ಮನುಷ್ಯರು ಕೋಟ್ಯಾಂತರ ಇರುವುದರಿಂದ ಮತ್ತು ಅವರಲ್ಲಿ ಬಹಳಷ್ಟು ಜನ “ನಗಣ್ಯ”ರೂ ಆಗಿರುವುದರಿಂದ ಅವರ ಸಾವು, ನೋವು, ಅಪಘಾತ, ಸುರಕ್ಷೆ, ಸುದ್ದಿಯೂ ಅಲ್ಲ, ಗಮನಹರಿಸಬೇಕಾದ ಸಮಸ್ಯೆಯೂ ಅಲ್ಲ. ಹೌದೆ? ನಿಜವೆ? ಒಂದು ಆಟೋದಲ್ಲಿ 12-13 ಜನ ಕುಳಿತು ಯಾವೊಂದು ಸುರಕ್ಷೆಯೂ ಇಲ್ಲದ ಹೆದ್ದಾರಿಯಲ್ಲಿ ಪ್ರಯಾಣಿಸುತ್ತಾರೆ; ದಿನಗೂಲಿಗೆ. 10-12 ಜನ ಮಾತ್ರ ಕೂಡಬಹುದಾದ ಜೀಪಿನಲ್ಲಿ ಮೇಲೆ-ಕೆಳಗೆ ಎಲ್ಲಾ ಸೇರಿ 20-25 ಜನ ಕಣಿವೆ-ಗುಡ್ಡ-ಬೆಟ್ಟಗಳಲ್ಲಿ ಮಳೆ-ಬಿಸಿಲು-ಗಾಳಿ-ಧೂಳನ್ನು ಅನುಭವಿಸುತ್ತ ಸಾಗುತ್ತಾರೆ. ಆಗಾಗ [...]

ಇದ್ದಿಲು ಮಾಡುತ್ತ ಕುರುಡಾಗುವರು; ದೇವಿಯ ಮೆರವಣಿಗೆಯಲ್ಲಿ ಹೆಂಗಸರಿಲ್ಲ!

ಇದ್ದಿಲು ಮಾಡುತ್ತ ಕಣ್ಣು ಕಳೆದುಕೊಳ್ಳುವವರು ಅಂದು ಮಾಗಡಿಯ ಹಳ್ಳಿಯಿಂದ ಹಾಸನಕ್ಕೆ ಹೋಗುತ್ತಿದ್ದೆ. ದಾರಿಯಲ್ಲಿ ಹೆದ್ದಾರಿಗೆ ಹತ್ತಿರದಲ್ಲಿಯೆ ಸುಮಾರು ಹತ್ತಾರು ಎಕರೆ ವಿಸ್ತೀರ್ಣದಲ್ಲಿ ದಟ್ಟ ಬಿಳಿ ಹೊಗೆ ಕಾಣಿಸಿತು. ಪರಿಸರ-ಹೊಗೆ-ತಾಪಮಾನ ಏರಿಕೆ-ಜೀವನ-ದುಡಿಮೆ, ಹೀಗೆ ಓಡಿದ ಮನಸ್ಸು ಅದೇನೆಂದು ನೋಡಲು ಪ್ರಚೋದಿಸಿತು. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿಗೆ ಸೇರಿದ ಜಾಗ ಅದು. ಹಾಸನ ಜಿಲ್ಲೆಯ ಗಡಿ ಬಹುಶಃ ಒಂದೆರಡು ಕಿ.ಮೀ. ಅದು ಕೊಬ್ಬರಿ ಚಿಪ್ಪನ್ನು ಇದ್ದಿಲು ಮಾಡುವ ದೇಸೀ ಉದ್ದಿಮೆ! ಕೊಬ್ಬರಿಚಿಪ್ಪನ್ನು ಇದ್ದಿಲು ಮಾಡುತ್ತ ಹೊಟ್ಟೆ ಹೊರೆದುಕೊಳ್ಳುವವರು ಇಲ್ಲಿರುವ ವಿಡಿಯೊ [...]

ಕೋರಮಂಗಲದಲ್ಲೊಬ್ಬ ಸ್ಲಮ್‍ಡಾಗ್ (?), ಹಾಗೂ ಬಾಲ ಭಿಕ್ಷುಕಿ

[ಮೊದಲಿಗೆ, ಆ ಹುಡುಗನನ್ನು "ಸ್ಲಮ್‍ಡಾಗ್" ಎಂದು ಹೆಸರಿಸಿದ್ದಕ್ಕೆ ಕ್ಷಮೆ ಕೇಳುತ್ತೇನೆ. "ಸ್ಲಮ್‍ಡಾಗ್ ಮಿಲಿಯನೇರ್" ಹಿನ್ನೆಲೆಯಲ್ಲಿ ರೂಪಕವಾಗಿ ಮಾತ್ರ ಹಾಗೆ ಬಳಸಿಕೊಂಡಿದ್ದೇನೆ.] ತಿಂಗಳ ಹಿಂದೆ ಭಾರತಕ್ಕೆ ಹೋಗಿದ್ದಾಗ ಮೊದಲನೆಯ ದಿನವೆ ಬೆಂಗಳೂರು ಸುತ್ತುವ ಕೆಲಸ ಇತ್ತು. ನಗರಕ್ಕೆ ಬರುವ ದಾರಿಯಲ್ಲಿ ಇಲೆಕ್ಟ್ರಾನಿಕ್ಸ್ ಸಿಟಿಯಲ್ಲಿ ಕೆಲಸ ಮಾಡುವ ಸ್ನೇಹಿತನನ್ನು ನೋಡಲು ಹೋದೆ. ಅಲ್ಲಿಯ STPI ಸಮೀಪವಿರುವ ಹೋಟೆಲ್‌ಗೆ ಹೋದೆವು. ಜೊತೆಗೆ ನನ್ನ ನಾಲ್ಕು ವರ್ಷದ ಮಗಳೂ ಇದ್ದಳು. ಕಾಫಿ ಮುಗಿಸಿ ಆ ಹೋಟೆಲ್‌ನಿಂದ ಹೊರಗೆ ಬಂದ ತಕ್ಷಣ ಕಾಣಿಸಿದ್ದು ಮುಂದಿನ [...]

ವಿಜಯ ಕರ್ನಾಟಕದ ಹೊಗಳು ಭಟ್ಟರು: ಭಾಗ – 3

ಇದೇ ವಿಷಯದ ಮೇಲಿನ ಭಾಗ – 1 ಮತ್ತು ಭಾಗ – 2 ನ್ನು ನೋಡಿರುವ ಕೆಲವು ಭಕ್ತರು ಅಪಾರ ಕಿರಿಕಿರಿಗೆ ಒಳಗಾಗಿದ್ದಾರೆ. ಕೇವಲ ದ್ವೇಷ, ರೋಷ ಮತ್ತು ಅಸಹನೆಯಿಂದ ಕುದಿಯುವ ಕೆಲವರಿಗೆ ತಾವು ಎಷ್ಟು ಮಾತ್ರದ ಅಜ್ಞಾನಿಗಳು ಎನ್ನುವ ತಿಳಿವಳಿಕೆಯೂ ಇದ್ದಂತಿಲ್ಲ. ಒಂದು ಸಂಚಿಕೆಯ ದಿನಾಂಕ ಕೊಟ್ಟರೂ ಅದು ಹೊರಬರುವ ದಿನ ಯಾವುದಿರಬಹುದು ಎನ್ನುವ ಜ್ಞಾನವೂ ಇಲ್ಲ. ತಿಳಿದುಕೊಳ್ಳಬೇಕು ಎನ್ನುವ ಯಾವೊಂದು ಕುತೂಹಲವಾಗಲಿ, ಸತ್ಯದ ಬಗ್ಗೆ ಗೌರವವಾಗಲಿ ಇಲ್ಲದ ಅಹಂಕಾರಿಗಳಿಗೆ ಏನು ಹೇಳಿದರೂ ವಿವೇಚನೆ ಬರುವುದಿಲ್ಲ. [...]

ವಿಜಯ ಕರ್ನಾಟಕದ ಹೊಗಳು ಭಟ್ಟರು : ಭಾಗ-2

ಹೊಗಳುವುದಕ್ಕೆ ಮುಂಚೆ ಆಗಿರುವ ಮಾತುಕತೆ ಇದು. “ವಿಕ್ರಾಂತ ಕರ್ನಾಟಕ”ದ ಗೌರವ ಸಂಪಾದಕರಾದ ರವೀಂದ್ರ ರೇಷ್ಮೆ ಆ ಪತ್ರಿಕೆಯ ಏಪ್ರಿಲ್ 10, 2009 ರ ಸಂಚಿಕೆಯ ಸಂಪಾದಕೀಯದಲ್ಲಿ ಬರೆದಿರುವ ಬರಹ ಇದು. “ವಿ.ಕ. ಭಟ್ಟರ ವಿಚಿತ್ರ ವ್ಯಾಕುಲ..” ಸ್ನೇಹಿತರೊಂದಿಗೆ ಕಾಫಿಶಾಪ್‌ನಲ್ಲಿ ಕುಳಿತಿರುವಾಗಲೆ ಅಂದು ಸಂಜೆ ಮೊಬೈಲ್ ಫೋನ್ ರಿಂಗಣಿಸಿತು. ಅಷ್ಟಾಗಿ ಪರಿಚಿತವಲ್ಲದ, ಅಪರೂಪಕ್ಕೊಮ್ಮೆ ಬಳಸಿರಬಹುದಾದ ನಂಬರ್ ಅದಾದ್ದರಿಂದ ಕುತೂಹಲದಿಂದಲೇ ಕೇಳಿಸಿಕೊಂಡದ್ದಾಯಿತು. “ನಾನು ವಿಶ್ವೇಶ್ವರ ಭಟ್ ಮಾತಾಡ್ತಿರೋದು.” “ಹೇಳಿ ಭಟ್ಟರೇ, ಚೆನ್ನಾಗಿದ್ದೀರಾ? ಏನಾದ್ರೂ ತುರ್ತಾಗಿ ಮಾತಾಡೋದಿತ್ತಾ?” “ಹೌದೌದು, ಇವತ್ತು ನನ್ನ [...]