ವಿಜಯ ಕರ್ನಾಟಕದ ಹೊಗಳು ಭಟ್ಟರು
ಕಳೆದ ಮೂರು ವಾರಗಳಿಂದ ಕರ್ನಾಟಕದ ಸುಮಾರು ಅರ್ಧ ಜಿಲ್ಲೆಗಳಲ್ಲಿ ಸುತ್ತಿದ ದೈಹಿಕ ಆಯಾಸ ಇನ್ನೂ ಹೋಗಿಲ್ಲ. ಅದರ ಜೊತೆಗೆ ಜೆಟ್ ಲ್ಯಾಗ್ ಸಮಸ್ಯೆ. ನಾಳೆ ಮತ್ತೆ ಪ್ರಯಾಣ ಹೊರಡಬೇಕಿದೆ, ಮೂರು ದಿನದ ಮಟ್ಟಿಗೆ. ವಾರಾಂತ್ಯದವರೆಗೆ ಮತ್ತೆ ಬಿಡುವಿಲ್ಲ. ಕಳೆದ ಎರಡು ಭಾನುವಾರಗಳಲ್ಲೂ ವಿಜಯ ಕರ್ನಾಟಕದಲ್ಲಿ ನನ್ನನ್ನು ಹೊಗಳಿ ಬರೆದಿದ್ದರು. ಹೊಗಳುವುದು ಅಂದರೆ ಗೊತ್ತಲ್ಲ; ಸುಳ್ಳು ಮತ್ತು ಉತ್ಪ್ರೇಕ್ಷೆ ಸಹಜ. ಅದರ ಜೊತೆಗೆ “ನೂರೆಂಟು ಸುಳ್ಳು” ಸೇರಿಕೊಂಡರೆ ಇನ್ನೂ ಭರ್ಜರಿಯಾಗಿರುತ್ತದೆ. ಇಂತಹುದೊಂದು ಹೊಗಳಿಕೆಗಳಿಗೆ ಸಾರ್ವಜನಿಕವಾಗಿ ಸಕ್ರಿಯರಾಗಿರುವವರು ಸದಾ ಸಿದ್ಧರಾಗಿರಬೇಕಾಗುತ್ತದೆ. [...]