ಅತಿ ದೌರ್ಭಾಗ್ಯದ ಹಾಲಿ ವಿಧಾನಸಭೆ

[ಇದು "ಮಾರ್ಥಾ ಸ್ಟುವರ್ಟಳೂ, ಕೃಷ್ಣಯ್ಯ ಶೆಟ್ಟಿಯೂ..." ಲೇಖನದ ಮುಂದುವರೆದ ಭಾಗ/ಟಿಪ್ಪಣಿ.] ಈ ಸಲದ ವಿಧಾನಸಭಾ ಶಾಸಕರಲ್ಲಿ ಇರುವುದೆ ಮೂರು ಗುಂಪು. ಹಾಲಿ ಆಡಳಿತ ಪಕ್ಷದ ಬಿಜೆಪಿ ಒಂದು ಗುಂಪಾದರೆ ಕಳೆದ ಹತ್ತಿಪ್ಪತ್ತು ವರ್ಷಗಳಿಂದ ಆಡಳಿತದಲ್ಲಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ಇನ್ನೆರಡು ಗುಂಪುಗಳು. ಪಕ್ಷೇತರರಲ್ಲಿ ಐದು ಜನ ಬಿಜೆಪಿಯೊಂದಿಗಿದ್ದಾರೆ. ಇನ್ನೊಬ್ಬರನ್ನು ಸದ್ಯಕ್ಕೆ ಕಾಂಗ್ರೆಸ್‌ನೊಂದಿಗೇ ಗುರುತಿಸಬಹುದು. ಅಂದರೆ, ಇರುವ ಈ ಮೂರು ಗುಂಪುಗಳೂ ಕಳೆದ ಹತ್ತು ವರ್ಷಗಳಲ್ಲಿ ಒಂದಲ್ಲ ಒಂದು ಸಮಯದಲ್ಲಿ ಆಡಳಿತ ನಡೆಸಿದವರೆ. ಸಾಧ್ಯವಾದಾಗ ತಮ್ಮತಮ್ಮ ಸಮಯದಲ್ಲಿ ಬಾಚಲು [...]

ಮಾರ್ಥಾ ಸ್ಟುವರ್ಟಳೂ, ಕೃಷ್ಣಯ್ಯ ಶೆಟ್ಟಿಯೂ…

[ಈ ಲೇಖನಕ್ಕೆ "ದೊಡ್ಡ ಹಗರಣಗಳಿಲ್ಲ; ಅಕ್ರಮವಾಗಿ ಶ್ರೀಮಂತರಾಗುತ್ತಿರುವ ರಾಜಕಾರಣಿಗಳಿಗೆ ಕಮ್ಮಿ ಇಲ್ಲ." ಎಂಬ ಶೀರ್ಷಿಕೆ ಕೊಟ್ಟಿದ್ದೆ. ಅದು ಅದೇ ಹೆಸರಿನಲ್ಲಿ ವಿಕ್ರಾಂತ ಕರ್ನಾಟಕದ ಆಗಸ್ಟ್ 7, 2009ರ ಸಂಚಿಕೆಯಲ್ಲಿ ಪ್ರಕಟವಾಗಿದೆ. ವಿಷಯದ ಗಾಂಭೀರ್ಯಕ್ಕೆ ಅದು ಸೂಕ್ತವಾದ ಹೆಸರು. ಆದರೆ, ಈ ಶೀರ್ಷಿಕೆ ಸ್ವಲ್ಪ ಕ್ಯಾಚ್ಚಿ ಎನ್ನಿಸಿದ್ದರಿಂದ ಇಲ್ಲಿ ಬ್ಲಾಗ್‌ನಲ್ಲಿ ಬದಲಾಯಿಸಿದ್ದೇನೆ. - ರವಿ...] ಕಳೆದ ಹತ್ತು ವರ್ಷಗಳಿಂದ ಕರ್ನಾಟಕ ಸರ್ಕಾರದ ಒಳಗೆ ಮತ್ತು ಅದರ ಸುತ್ತಮುತ್ತ ನಡೆದ ಹಗರಣಗಳನ್ನು ನೆನಪಿಸಿಕೊಳ್ಳಿ… ಹೇಗೆ ತಾನೆ ಅಷ್ಟು ಸುಲಭವಾಗಿ ನೆನಪಾದೀತು? [...]

ಗಾಂಧಿ ಜಯಂತಿ ಕಥಾಸ್ಪರ್ಧೆ- 2009

ಕಳೆದ ವರ್ಷ ವಿಕ್ರಾಂತ ಕರ್ನಾಟಕದ ಸಹಯೋಗದೊಂದಿಗೆ ಈ ಕಥಾಸ್ಪರ್ಧೆ ಪ್ರಾಯೋಜಿಸಿದ್ದೆ. ಇದು ಈ ವರ್ಷವೂ ಮುಂದುವರೆಯುತ್ತಿದೆ. ವಿವರಗಳು ಈ ಕೆಳಗಿನ ಚಿತ್ರದಲ್ಲಿದೆ. (ಅದನ್ನು ಕ್ಲಿಕ್ ಮಾಡಿದರೆ ಅದು ದೊಡ್ಡದಾಗಿ ತೆರೆದುಕೊಳ್ಳುತ್ತದೆ.) ಆಸಕ್ತರು ಮತ್ತು ಕತೆಗಾರರು ಗಮನಿಸಬೇಕಾಗಿ ವಿನಂತಿ. ಕಳೆದ ವರ್ಷ ಈ ಪ್ರಯುಕ್ತ ಬರೆದಿದ್ದ ಬ್ಲಾಗ್ ಲೇಖನ ಇಲ್ಲಿದೆ: ಗಾಂಧಿ ಜಯಂತಿ ಕಥಾಸ್ಪರ್ಧೆ – 2008 ಆ ಕಥಾಸ್ಪರ್ಧೆಯಲ್ಲಿ ಗೆದ್ದ ಕತೆಗಳು ಇಲ್ಲಿ (ವಿಚಾರಮಂಟಪ.ನೆಟ್) ಓದಲು ಲಭ್ಯವಿವೆ.

ಪ್ರತಿಭಾ ನಂದಕುಮಾರರ “ದೇವಿ” – ಹೊಡೆದು ಕೆಡವಿ ದಕ್ಕಿಸಿಕೊಳ್ಳಲಾರಿರಿ

ಪ್ರತಿಭಾ ನಂದಕುಮಾರ್ ಕನ್ನಡದ ಸಮಕಾಲೀನ ಕವಯತ್ರಿಯರಲ್ಲಿ ಪ್ರಮುಖರು. Firebrand ಕವಯತ್ರಿ ಪಟ್ಟದಿಂದ ಹಿರಿಯ ಕವಿ-ಲೇಖಕಿಯಾಗಿ ಅವರು ರೂಪಾಂತರಗೊಳ್ಳುತ್ತಿರುವ ಸಂದರ್ಭ ಇದು. ಪ್ರತಿಭಾ ಕೇವಲ ತಮ್ಮ ವೈಯಕ್ತಿಕ ಕಷ್ಟನಷ್ಟದ ಬಗ್ಗೆಯೇ ಬರೆದುಕೊಂಡವರಲ್ಲ. ಹಾಗೆಯೆ ಕೇವಲ ಕಾವ್ಯ, ರಸ, ರಸಾನುಭೂತಿ, ಮುಂತಾದ ಯಾರ ಉಸಾಬರಿಗೂ ಹೋಗದ ವಿಷಯಗಳಲ್ಲಿ ಮುಳುಗಿದವರೂ ಅಲ್ಲ. ಅವರು ಕಾಲಕಾಲಕ್ಕೆ ಸಮಕಾಲೀನ ಸಾಮಾಜಿಕ ಘಟನೆಗಳಿಗೆ ಸ್ಪಂದಿಸುತ್ತ ಬಂದಿದ್ದಾರೆ; ವಿಶೇಷವಾಗಿ ಹೆಣ್ಣು ಮತ್ತು ಅವಳ ಶೋಷಣೆಯ ಸುತ್ತಮುತ್ತಲ ವಿಷಯಗಳಿಗೆ. ಇನ್ನು ಪತ್ರಕರ್ತರಾಗಿಯೂ ಹಲವಾರು ವಿಷಯಗಳನ್ನು ದಿಟ್ಟವಾಗಿ ಎತ್ತಿಕೊಂಡವರವರು. ಕೆಲವು [...]

ಓಂಕಾರ ಉರುಳಾಗಿ, ಅರ್ಧಚಂದ್ರ ಕತ್ತಿಯಾಗಿ, ಶಿಲುಬೆ ಬಡಿಗೆಯಾಗಿ…

ಇವತ್ತಿನ ಸುದ್ದಿ: ದ.ಕ, ಉಡುಪಿ: ವ್ಯಾಪಕ ಮಳೆ (ಪ್ರಜಾವಾಣಿ, ಜುಲೈ 2, 09) ಎರಡುಮೂರು ವಾರದ ಹಿಂದೆ Outlook ಪತ್ರಿಕೆಯ ತಮ್ಮ “Bangalore Byte”ನಲ್ಲಿ ಸುಗತ ರಾಜು “A Poetic Implosion” ಎನ್ನುವ ಲೇಖನ ಬರೆದಿದ್ದರು. ಮಂಗಳೂರಿನಿನಲ್ಲಿ ಶ್ರೀರಾಮ ಸೇನೆ ಹೆಂಗಸರ ಮೇಲೆ ದಾಳಿ ಮಾಡಿದ್ದು ಚುನಾವಣೆಯಲ್ಲಿ ಯಾವುದೇ ತರಹದ ಕೋಪೋದ್ರಿಕ್ತ ಪ್ರತಿಕ್ರಿಯೆಯನ್ನು ತೋರಿಸದಿದ್ದರೂ ಕನಿಷ್ಟ ಎರಡು ಉತ್ತಮ ಕವನಗಳಿಗೆ ಜನ್ಮ ನೀಡಿತು ಎಂದು ಅದರಲ್ಲಿ ಅವರು ಬರೆದಿದ್ದರು. ಅದು ಎರಡು ಕನ್ನಡ ಕವನಗಳ ಬಗ್ಗೆ. ಅವರು [...]